ಕೊಪ್ಪಳ : ಲಕ್ಷ ಜನರಲ್ಲಿ ಒಂದು ಸಾವಿರ ಜನಕ್ಕೆ ಕ್ಯಾನ್ಸರ್ ಕಾಣಿಸಿಕೊಳ್ತಿದೆ. ಕ್ಯಾನ್ಸರ್ ಪತ್ತೆಗಾಗಿ ಕೊಪ್ಪಳದಲ್ಲಿ ತಿಂಗಳಲ್ಲಿ ಎರಡು ಬಾರಿ ಉಚಿತ ಶಿಬಿರ ನಡೆಸಲಾಗುತ್ತಿದೆ ಎಂದು ಹುಬ್ಬಳ್ಳಿಯ HCG ಕ್ಯಾನ್ಸರ್ ಆಸ್ಪತ್ರೆಯ ಡಾ. ಸಂತೋಷ ಚಿಕ್ಕರಡ್ಡಿ ಹೇಳಿದರು.
ಬುಧವಾರ ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿದ ಅವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಮಂಗಳವಾರ ಕೊಪ್ಪಳದ ಖುಷಿ ಆಸ್ಪತ್ರೆ, ತಾರಾ ( ಕಲಾಲ್) ಆಸ್ಪತ್ರೆ, ಮತ್ತು ಶ್ರಿ ಗವಿಸಿದ್ದೇಶ್ವರ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ನಡೆಸುತ್ತೇವೆ. ಕ್ಯಾನ್ಸರ್ ಲಕ್ಷಣ ಕಂಡುಬಂದವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ನಮ್ಮ ಆಸ್ಪತ್ರೆಗೆ ಶಿಫಾರಸ್ಸು ಮಾಡುತ್ತೇವೆ.
ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ಹೆಚ್ಚು , ಪುರುಷರಲ್ಲಿ ಬಾಯಿ, ದವಡೆ, ಅನ್ನನಾಳದ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದೆ. ದುಶ್ಚಟ, ಆಹಾರ ಪದ್ದತಿ, ಬದುಕಿನ ಶೈಲಿ ಕೂಡ ಕ್ಯಾನ್ಸರ್ ಗೆ ಪ್ರಮುಖ ಕಾರಣ.
ಆರೋಗ್ಯ ಸಂಜಿವೀನಿ, ಇಎಸ್ಐ ಸೇರಿದಂತೆ ವಿವಿಧ ಯೋಜನೆಯಡಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತೇವೆ ಎಂದು ಡಾ. ಚಿಕ್ಕರಡ್ಡಿ ಹೇಳಿದರು.
ಈ ಸಂದರ್ಭದಲ್ಲಿ ಡಾ. ಆದರ್ಶ ಹೆಗಡೆ ಉಪಸ್ಥಿತರಿದ್ದರು.