ಕೊಪ್ಪಳ : ಲೋಕಸಭಾ ಚುನಾವಣೆ ನಿಮಿತ್ಯ ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ ಮತ್ತು ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಶನಿವಾರ ಮಧುಶ್ರೀ ಗಾರ್ಡನ್ ನಲ್ಲಿ ಜರುಗಿತು.
ಸಭೆಯಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ ಬಿಜೆಪಿ ಕಣಕ್ಕೆ ಇಳಿಸುತ್ತಿರುವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಕ್ಷೇತ್ರಕ್ಕೆ ಯುವ ಮುಖ ಮತ್ತು ವಿದ್ಯಾವಂತರು. ದೇಶದ ಹಿತದೃಷ್ಟಿಯಿಂದ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಡಾ. ಬಸವರಾಜ ಅವರನ್ನು ಗೆಲ್ಲಿಸೋಣ.
ಲೋಕಸಭಾ ಕ್ಷೇತ್ರ ವ್ಯಾಪ್ತಿಯ 2-3 ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಉತ್ತಮ ವಾತಾವರಣ ಇದೆ. ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಸೇರಿ ಅಭ್ಯರ್ಥಿ ಗೆಲ್ಲಿಸೋಣ ಎಂದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮಾತನಾಡಿ ಕ್ಷೇತ್ರದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತುಕೊಟ್ಟು ಅಭಿವೃದ್ಧಿ ಮಾಡುವ ಕನಸಿದೆ. ಮತ್ತು ದೇಶದ ಒಳಿತಿಗಾಗಿ ನರೇಂದ್ರ ಮೋದಿಯವರು ಪ್ರಧಾನಿಯಾಗಲು ತಮ್ಮನ್ಮು ಗೆಲ್ಲಿಸಿ ಎಂದು ಮನವಿ ಮಾಡಿದರು.
ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಮಾತನಾಡಿ 2019 ರ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭೆ ಕ್ಷೇತ್ರದಲ್ಲಿ 12 ಸಾವಿರಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಿಸುಲಿದ್ದೇವೆ. 2023 ವಿಧಾನಸಭೆ ಚುನಾವಣೆಯಲ್ಲಿ ನಾನು ಜೆಡಿಎಸ್ ನಿಂದ 45 ಸಾವಿರ ಬಿಜೆಪಿ ಅಭ್ಯರ್ಥಿ 64 ಸಾವಿರ ಮತ ಪಡೆದಿದ್ದೇವೆ. ಮತವಿಭಜನೆಯಾಗಿ ಸೋತಿದ್ದೇವೆ. ಒಗ್ಗೂಡಿದರೆ ಕೊಪ್ಪಳ ವಿಧಾನಸಭೆ ಕ್ಷೇತ್ರದಲ್ಲಿ ಲಕ್ಷಕ್ಕೂ ಹೆಚ್ಚು ಮತಗಳು ನಮಗೆ ಖಂಡಿತ. ಈ ಬಾರಿ ಲೋಕಸಭೆ ಗೆ ಡಾ. ಬಸವರಾಜ ಅವರಿಗೆ ಬಹುಮತ ನೀಡಿ ಗೆಲ್ಲಿಸೋಣ ಎಂದರು.
ಮಾಜಿ ಸಂಸದರಾದ ಕೆ.ವಿರುಪಾಕ್ಷಪ್ಪ , ಶಿವರಾಮನಗೌಡ, ಮಾಜಿ ಶಾಸಕರಾದ ಬಸವರಾಜ ದಡೇಸೂಗುರು, ಪರಣ್ಣ ಮುನವಳ್ಳಿ , MLC ಹೇಮಲತಾ ನಾಯಕ, ಮಾಜಿ ಸಚಿವರಾದ ಹಾಲಪ್ಪ ಆಚಾರ , ಸಿಂಧನೂರಿನ ನಾಡಗೌಡ್ರು , ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಅನೇಕರು ಮಾತನಾಡಿದರು.