ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಶಾಸಕ ರಾಘವೇಂದ್ರ ಹಿಟ್ನಾಳ ಶನಿವಾರ ಕವಲೂರು ಗ್ರಾಮದಲ್ಲಿ ಆರಂಭಿಸಿದರು.
ಚುನಾವಣಾ ಪ್ರಚಾರ ಸಭೆ ಮುನ್ನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಾಸಕ ರಾಘವೇಂದ್ರ ಹಿಟ್ನಾಳ ಹೊರ ಬಂದಾಗ ಕೆಲ ಯುವಕರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಆಗ ಹತ್ತಿರದಲ್ಲಿದ್ದ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಮುಖಂಡರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಇದೇ ವಿಷಯವಾಗಿ ಮಾತಿಗೆ ಮಾತು ಬೆಳೆದು ವಾಗ್ವಾದ ತಳ್ಳಾಟ ನೂಕಾಟ ನಡೆಯಿತು. ಇದರಿಂದ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ಕಂಡು ಬಂತು. ಇವತ್ತು ಶನಿವಾರ ನಾವು ಜೈ ಶ್ರೀರಾಮ ಅನ್ನುತ್ತೇವೆ ಎಂದು ಯುವಕನೊಬ್ಬ ನಮ್ಮ ಗ್ರಾಮದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂತು.
ಈ ಸಂದರ್ಭದಲ್ಲಿ ಯುವಕರು ಜೈ ಶ್ರೀರಾಮ ಘೋಷಣೆ ಕೂಗುತ್ತಲೆ ರಾಘವೇಂದ್ರ ಹಿಟ್ನಾಳ ಅಲ್ಲಿಂದ ಹೊರಟು ಹೋದರು ಎಂದು ತಿಳಿದು ಬಂದಿದೆ.
ಜೈ ಶ್ರೀರಾಮ ಘೋಷಣೆ ಕೂಗಿದ ಯುವಕರು ಯಾವುದೇ ಪಕ್ಷದ ಕಾರ್ಯಕರ್ತರು ಅಲ್ಲ ಎನ್ನಲಾಗುತ್ತಿದೆ.