ಕೊಪ್ಪಳ : ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿ ಬುಧವಾರ ಬೆಂಗಳೂರಿನಲ್ಲಿ ಸಿಎಂ ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಮೇಲೆ ರಾಜಕೀಯ ವಲಯದಲ್ಲಿ ಸಂಚಲನ ಉಂಟಾಗಿದೆ.
ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿದ ಮೇಲೆ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಏನು ಎಫೆಕ್ಟ್ ಆಗುತ್ತೆ ಎಂಬ ಚರ್ಚೆ ನಡೆದಿದ್ದರೂ ಅದಕ್ಕಿಂತ ಹೆಚ್ಚು ಚರ್ಚೆ ಕಾಂಗ್ರೆಸ್ ನಲ್ಲಿ ಸಂಗಣ್ಣ ಕರಡಿ ಸ್ಥಾನಮಾನ ಏನು ? ಎಂಬುದಾಗಿದೆ.
ಜುಲೈ ಅಥವಾ ಡಿಸೆಂಬರ್ ಹೊತ್ತಿಗೆ MLC ಆಗುವ ಬಗ್ಗೆ ಚರ್ಚೆ ನಡೆದಿದ್ದು ಬುಧವಾರ ಕೊಪ್ಪಳದಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಗಂಗಾವತಿ ಶಾಸಕ ಜನಾರ್ದನ ರಡ್ಡಿ ಆಡಿದ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿದ್ದು ಅವರಿಗೆ ಮುಂದೆ ಗಂಗಾವತಿ ಕಾಂಗ್ರೆಸ್ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂಬ ರಡ್ಡಿ ಮಾತಿನ ವಿಡಿಯೋ ಈಗ ವೈರಲ್ ಆಗಿ ತೀವ್ರ ಸಂಚಲನ ಮೂಡಿಸಿದೆ.