Advt. 
 Views   95
Apr 19 2024 9:00AM

ಕೊಪ್ಪಳ - ಕನಕಗಿರಿ ತಾಲೂಕಿನಲ್ಲಿ ಘಟನೆ


ಕೊಪ್ಪಳ : ಜಿಲ್ಲೆಯ ಎರಡು ಕಡೆ ಕರಡಿ ದಾಳಿ ನಡೆದಿದ್ದು ಓರ್ವ ವೃದ್ದ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಜರುಗಿದೆ.

ಕೊಪ್ಪಳ ತಾಲ್ಲೂಕಿನ ನಾಗೇಶನಹಳ್ಳಿ ಹತ್ತಿರ ಕರಡಿಯ ದಾಳಿಗೆ ಈರಪ್ಪ , ಹೇಮವ್ವ , ಗೌತಮಿ, ಎಂಬುವವರು ಗಾಯಗೊಂಡಿದ್ದಾರೆ. 

ಈ ಮೂವರು ನಾಗೇಶನಹಳ್ಳಿಯಿಂದ ಬೈಕ್ ನಲ್ಲಿ ತೋಟಕ್ಕೆ ಹೊರಟಿದ್ದಾಗ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನಕಗಿರಿ ತಾಲ್ಲೂಕಿನ ರಾಂಪುರ ಹತ್ತಿರ ಕರಡಿ ದಾಳಿಗೆ ವಯೋವೃದ್ದ ಚೆನ್ನಪ್ಪ (74) ಎಂಬುವವರು ಮೃತಪಟ್ಡಿದ್ದಾರೆ.  ಗ್ರಾಮದ ಕೆರೆ ಹತ್ತಿರದ ಆಂಜನೇಯ ದೇವಸ್ಥಾನಕ್ಕೆ ಆಗಾಗ ಕರಡಿ ಬರುತ್ತಿದ್ದು ಹೀಗೆ ಬಂದ ಕರಡಿಯ ಮಾಹಿತಿ ಅರಣ್ಯ ಇಲಾಖೆಗೆ ತಿಳಿಸಿದ್ದು ಅರಣ್ಯ ಇಲಾಖೆಯವರು ಬರುವುದು ತಡವಾಗಿದೆ. ಅಲ್ಲಿಂದ ಹೊರ ಬಂದ ಕರಡಿ ವೃದ್ದ ಚೆನ್ನಪ್ಪ ಎಂಬುವವರ ಮೇಲೆ ದಾಳಿ ಮಾಡಿದೆ.

ಗಾಯಗೊಂಡ ಚೆನ್ನಪ್ಪ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


May 2 2024 7:59PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಜಿಲ್ಲಾಧಿಕಾರಿಗಳ ಪ್ರಕಟಣೆ
Apr 28 2024 8:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಂದೆ ಮಗ ಒಂದೇ ದಿನ ನಿಧನ
Apr 28 2024 8:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಸಂವಿಧಾನ ಪೀಠಿಕೆ ಓದುವುದರ ಮೂಲಕ ಮಾಂಗಲ್ಯಧಾರಣೆ
Apr 28 2024 7:39PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ಸಕ್ಸಸಫುಲ್ : ರಡ್ಡಿ ಶ್ರೀನಿವಾಸ
Apr 27 2024 7:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಗುಳದಳ್ಳಿಯಲ್ಲಿ ಸಾಮೂಹಿಕ ವಿವಾಹಗಳು
Apr 27 2024 9:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಪಕ್ಷ ಬಿಜೆಪಿ
Apr 26 2024 9:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮದುವೆಯಲ್ಲಿ ಮತದಾನ ಜಾಗೃತಿ
Apr 26 2024 7:08AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ
Apr 25 2024 12:06PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮತದಾನಕ್ಕೆ ಮುನ್ನ ಅಜ್ಜಿ ನಿಧನ
Apr 25 2024 8:46AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಚಿನ್ಹೆಗಳು





     
Copyright © 2021 Agni Divya News. All Rights Reserved.
Designed & Developed by We Make Digitize